ಬಿ.ಎಂ.ಶ್ರೀ.
"ಕನ್ನಡದ ಕಣ್ವ" ಆಚಾರ್ಯ ಬಿ.ಎಂ. ಶ್ರೀಕಂಠಯ್ಯನವರು ಹೊಸಗನ್ನಡದ ಯುಗಪುರುಷರು; ಇಂದು ಹೊಸಗನ್ನಡದ ಸಾಹಿತ್ಯ ಎಂದು ಯಾವುದನ್ನು ಕರೆಯುತ್ತೇವೆಯೋ ಅದೆಲ್ಲಕ್ಕೂ ಪ್ರೇರಕ ಶಕ್ತಿ. ಇಂದಿನ ಎಲ್ಲ ಹೆಸರಾಂತ ಸಾಹಿತಿಗಳೂ ಇವರ ಶಿಷ್ಯ - ಪ್ರಶಿಷ್ಯರೇ. ಇಂತಹ ಆಚಾರ್ಯ ಪುರಷರ ಹೆಸರಿನ ಈ ಸಂಸ್ಥೆ ಸೃಜನ ಮತ್ತು ಸಂಶೋಧನ ಎರಡೂ ಸಾಹಿತ್ಯ ಕ್ಷೇತ್ರಗಳಲ್ಲಿ ದುಡಿಯುತ್ತಿದೆ. ಒಂದು ಪ್ರಾಚೀನ ಸಾಹಿತ್ಯ ಪರಿಷ್ಕರಣ. ಇನ್ನೊಂದು ಆಧುನಿಕ ಸಾಹಿತ್ಯದ ಪುರಸ್ಕರಣ. ಸ್ಥಾಪನೆ : ಮೇ 6, 1979 ಕನ್ನಡದಲ್ಲಿರುವ ಕೆಲವೇ ಸಂಶೋಧನಾತ್ಮಕ ನಿಯತಕಾಲಿಕೆಗಳಲ್ಲಿ ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿರುವ "ಕರ್ನಾಟಕ ಲೋಚನ" ಪತ್ರಿಕೆಯನ್ನು ಪ್ರತಿಷ್ಠಾನ 1982ರಲ್ಲಿ ಆರಂಭಿಸಿತು. ಸಂಶೋಧನ ಕ್ಷೇತ್ರದ ವಿವಿಧ ಶಾಖೆಗಳಲ್ಲಿ ನುರಿತ ವಿದ್ವಾಂಸರು ಬರೆಯುವ ಸಂಶೋಧನ ಲೇಖನಗಳು, ಟಿಪ್ಪಣಿಗಳು, ಸಂಶೋಧನ ಗ್ರಂಥಗಳ ವಿಮರ್ಶೆ, ಟೀಕೆ-ಟಿಪ್ಪಣಿ ಇತ್ಯಾದಿ ಇದರಲ್ಲಿರುತ್ತವೆ. ನಿಯತವಾಗಿ ಪ್ರಕಟವಾಗುತ್ತಿರುವ ನಾಡಿನ ಏಕೈಕ ವಿದ್ವತ್ ಪತ್ರಿಕೆ ಎಂಬ ಹೆಗ್ಗಳಿಕೆ ಇದಕ್ಕಿದೆ. ವಾರ್ಷಿಕ ಚಂದಾ : ವ್ಯಕ್ತಿಗಳಿಗೆ ರೂ. 40/- ಅಜೀವ ರೂ. 400/-, ಸಂಸ್ಥೆ ಗ್ರಂಥಾಲಯಗಳಿಗೆ ವಾರ್ಷಿಕ 100-00. ಪ್ರತಿಷ್ಠಾನದ ಸದಸ್ಯರಿಗೆ ಉಚಿತ. ಬಿ.ಎಂ.ಶ್ರೀ. ಪ್ರತಿಷ್ಠಾನಕ್ಕೆ ನೀವೂ ಈ ರೀತಿಯಾಗಿ ಸಹಾಯ ಮಾಡಬಹುದು?
|
ಬಿ.ಎಂ.ಶ್ರೀ. ಕಲಾಭವನ150 ರಿಂದ 200 ಜನರಿಗೆ ಸ್ಥಳಾವಕಾಶ, ಧ್ವನಿ - ಬೆಳಕಿನ ಸೌಲಭ್ಯ ಇರುವ ಈ ಸಭಾ ಭವನ ಸಾಹಿತ್ಯ - ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲಕರವಾಗಿದೆ. ಉಪನ್ಯಾಸ, ವಿಚಾರಗೋಷ್ಠಿ, ಸ್ತಕ ಬಿಡುಗಡೆ, ಕವಿಗೋಷ್ಠಿ, ಸಭೆ, ಸಂವಾದ, ಸಂಗೀತ, ನೃತ್ಯ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಸಾಂಕೇತಿಕ ಸೇವಾ ಶುಲ್ಕದ ಮೇರೆಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳಿಗೆ ನೀಡಲಾಗುವುದು. |